7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿ ಬೇಡಿಕೆ ಈಡೇರಿಕೆಗೆ ಫೆ. 7ರ ಗಡುವು ನೀಡಿದ ಕೆಎಂಎಫ್ ನೌಕರರು

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಂಎಫ್ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳ ನೌಕರರು ಫೆಬ್ರವರಿ 7ರ ಗುಡುವು ನೀಡಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಲ ಮತ್ತು ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಭತ್ಯೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಬೇಕು ಎಂದು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಅಧಿಕಾರಿಗಳು, ನೌಕರರು ನಿರ್ಧರಿಸಿದ್ದರು.

ವೇತನ ಆಯೋಗ ಶಿಫಾರಸು ಜಾರಿ ಬಗ್ಗೆ ಸದ್ಯದಲ್ಲಿ ಆದೇಶ ಹೊರಡಿಸುವುದಾಗಿ ಕೆಎಂಎಫ್ ಅಧ್ಯಕ್ಷರು ಭರವಸೆ ನೀಡಿದ್ದರಿಂದ ಮುಷ್ಕರ ಮುಂದೂಡಲಾಗಿದೆ. ರೈತರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಫೆಬ್ರವರಿ 7ರೊಳಗೆ ಆದೇಶ ಜಾರಿಗೊಳಿಸದಿದ್ದರೆ ಫೆಬ್ರವರಿ 10ರಂದು ಸಂಘದ ಕಾರ್ಯ ಮಂಡಳಿ ಸಭೆ ಸೇರಿ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಕೃಷ್ಣಪ್ಪ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read