ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ ತಿದ್ದಲು ಪ್ರತಿ ಹುದ್ದೆಗೆ 30 ರಿಂದ 50 ಲಕ್ಷ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಐದು ಸಂಘಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ತೆರವುಗೊಳಿಸಿದೆ.

ನೇಮಕಾತಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಅನುಮತಿ ನೀಡಲಾಗಿದೆ. ಆಯ್ಕೆ ಪಟ್ಟಿ ಪ್ರಕಟ ಮತ್ತು ನೇಮಕಾತಿ ಆದೇಶ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read