ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಕುರಿತಾಗಿ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ವಕೀಲ ವಿದ್ಯಾಧರ್ ಗೌಡ ಬಂಧಿತ ಆರೋಪಿ. ಬಂಧನದ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಸಪ್ತಸಾಗರ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷನ್ ಕಾರ್ಯಪ್ಪ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದು, ಬಳಿಕ ಇದರ ಸ್ಕ್ರೀನ್ ಶಾಟ್ ಎಲ್ಲಾ ಕಡೆ ವೈರಲ್ ಆಗಿತ್ತು. ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಎಸ್ಪಿಗೆ ಮನವಿ ಸಲ್ಲಿಸಿದ್ದವು.

ತನಿಖೆಯ ಬಳಿಕ ವಿದ್ಯಾಧರ್ ಗೌಡ ಅವರನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ತನಿಖೆ ಮುಂದುವರೆದಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read