ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ ಪ್ರತಿಮೆ ಸಮೀಪದಿಂದ ಗಾಂಧಿ ವೃತ್ತದವರೆಗೂ ಪ್ರತಿಭಟನೆ ನಡೆಸಿ ಧರಣಿ ನಡೆಸಲಾಗುವುದು.

ಜನತಾದರ್ಶನದಲ್ಲಿ ಸಂಸದ ಮುನಿಸ್ವಾಮಿಗೆ ಅವಮಾನ, ಕ್ಲಾಕ್ ಟವರ್ ನಲ್ಲಿ ತಲ್ವಾರ್ ದ್ವಾರ ನಿರ್ಮಿಸಲು ಅನುಮತಿ ಹಾಗೂ ಜಿಲ್ಲೆಯಲ್ಲಿ ಅಶಾಂತಿ, ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಕೆ.ಎಸ್. ಈಶ್ವರಪ್ಪ, ಬಿಜೆಪಿ ನಾಯಕ ಸಿ.ಟಿ. ರವಿ ಸೇರಿ ಹಲವಾರು ನಾಯಕರು ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read