BREAKING : ಕೊಪ್ಪಳದಲ್ಲಿ ಸಿಲಿಂಡರ್ ಸ್ಫೋಟಗೊಂಡು ಘೋರ ದುರಂತ : 7 ಜನರಿಗೆ ಗಂಭೀರ ಗಾಯ.!

ಕೊಪ್ಪಳ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳದಲ್ಲಿ ಈ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು, 7 ಜನರು ಗಾಯಗೊಂಡಿದ್ದಾರೆ. ಮನೆ ಕೂಡ ಹಾನಿಯಾಗಿದೆ.

ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಶ್ರೀಕಾಂತ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read