ಕೊಪ್ಪಳ: ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.
ಚನ್ನಪ್ಪ ಹುಸೇನಪ್ಪ ನಾರಿಹಾಳ (35) ಕೊಲೆಯಾದ ವ್ಯಕ್ತಿ. ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ನಿನ್ನೆ ಬೇಕರಿಗೆ ನುಗ್ಗಿ, ಚನ್ನಪ್ಪ ಅವರನ್ನು ಬೇಕರಿಯಿಂದ ಹೊರಗೆಳೆದು ತಂದು ಮನಬಂದಂತೆ ಮಾರಕಾಸ್ತ್ರಗಳಿಂದ ಹೊಡೆದು ಸಾಯಿಸಿದ್ದರು.
ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಮೂವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ. 20 ವರ್ಷಗಳ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.