KPSC ಅಧ್ಯಕ್ಷರ ವಿರುದ್ಧ ದೂರು ನೀಡಿದ್ದ ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷರ ವಿರುದ್ಧ ಸರ್ಕಾರಕ್ಕೆ ದೂರು ನೀಡಿದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಸ್ಥಾನದಿಂದ ಲತಾ ಕುಮಾರಿಯವರನ್ನು ಬಿಡುಗಡೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸೊಸೈಟಿ ಕಾರ್ಯನಿರ್ವಾಹ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಅವರಿಗೆ ಕೆಪಿಎಸ್‌ಸಿ ಕಾರ್ಯದರ್ಶಿ ಸ್ಥಾನವನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನೀಡಲಾಗಿದೆ.

ಕೆಪಿಎಸ್‌ಸಿ ಕಾನೂನು ಕೋಶದ ಮುಖ್ಯಸ್ಥರ ನೇಮಕದಲ್ಲಿ ಆಯೋಗದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ನಡುವೆ ಒಮ್ಮತವಿಲ್ಲದೇ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿವರೆಗೂ ದೂರು ಸಲ್ಲಿಕೆಯಾಗಿತ್ತು. ಆಯೋಗದ ಸಭೆಗಳಲ್ಲಿ ನಿರ್ಣಯ ಕೈಗೊಳ್ಳುವ ವಿಚಾರದಲ್ಲಿಯೂ ಗೊಂದಲವಾಗಿ ನೇಮಕಾತಿ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಈ ಬೆಳವಣಿಗೆಗಳ ನಂತರ ಕಾರ್ಯದರ್ಶಿ ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read