ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಶೇಕಡ 32ರಷ್ಟು ಹೆಚ್ಚು ಮಳೆಯಾಗಿದೆ. 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬೆಳೆ ಹಾನಿಗೆ ಇನ್ನೊಂದು ವಾರದಲ್ಲಿ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು, ಸಂಪೂರ್ಣ ಹಾನಿಯಾದ ರಸ್ತೆಗಳನ್ನು ಪಟ್ಟಿ ಮಾಡಿ ವರದಿ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭೂಕುಸಿತ ಸೇರಿ ಮಳೆ ಸಂಬಂಧಿತ ದುರಂತಗಳಲ್ಲಿ 58 ಜನ ಮೃತಪಟ್ಟಿದ್ದು, ಅವರ ಕುಟುಂಬದವರಿಗೂ ಪರಿಹಾರ ನೀಡಲಾಗಿದೆ. ಹಾಳಾದ ರಸ್ತೆಗಳ ದುರಸ್ತಿಗೆ ಜಿಲ್ಲಾಧಿಕಾರಿಗಳಿಗೆ 760 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read