ಕೃಷ್ಣಾ ನದಿಯಲ್ಲಿಂದು ಮತ್ತೊಬ್ಬರ ಶವ ಪತ್ತೆ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬನ ಮೃತದೇಹ ಪತ್ತೆಯಾಗಿದೆ.

ಕೊಲ್ಹಾರ ಪಟ್ಟಣದ ನಿವಾಸಿ ತಯ್ಯಾಬ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಪುಂಡಲೀಕ ಯಂಕಂಚಿ ಶವ ಪತ್ತೆಯಾಗಿತ್ತು. ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ಆರು ಜನರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಉಳಿದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ ವೆಲ್ ಸಮೀಪ ಮಂಗಳವಾರ ಸಂಜೆ ಎಂಟರಿಂದ ಹತ್ತು ಜನ ಜೂಜಾಟದಲ್ಲಿ ತೊಡಗಿದ್ದು, ಈ ವೇಳೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಬಂಧನ ಭೀತಿಯಿಂದ ಆತಂಕಗೊಂಡ ಕೆಲವರು ಸಮೀಪದಲ್ಲಿದ್ದ ತೆಪ್ಪ ಏರಿ ಕೃಷ್ಣಾ ನದಿ ದಾಟಲು ಮುಂದಾಗಿದ್ದಾರೆ. ಈ ವೇಳೆ ತೆಪ್ಪ ಮಗುಚಿ 6 ಜನ ನೀರು ಪಾಲಾಗಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read