ಮಂಡ್ಯ: ಕೆ ಆರ್ ಎಸ್ ಡ್ಯಾಂ ಬಳಿ ಗಂಗಾ ಆರತಿ ಮಾದರಿಯಲ್ಲಿಯೇ ಕಾವೇರಿ ಆರತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ ಡ್ಯಾಂ ಬಳಿ ಕಾವೇರಿ ಆರತಿ ಮಾಡಲು ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರೈತರ ಸಭೆ ನಡೆಸಿದ ಕೃಷಿ ಸಚಿವ ಚಲುವರಾಯಸ್ವಾಮಿ, ರೈತರ ಪ್ರತಿಭಟನೆಗೆ ಕಾರಣವೇನು ಎಂದು ರೈತರ ಮುಖಂಡರಿಂದ ಮಾಹಿತಿ ಪಡೆದರು. ಈ ವೇಳೆ ಸರ್ಕಾರವೇ ಕೆ ಆರ್ ಎಸ್ ಡ್ಯಾಂ ಸುರಕ್ಷತೆ ಮುರಿಯಲು ಹೊರಟಿದೆ. ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿಗೆ ನಮ್ಮ ವಿರೀಧವಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ ಮಾಡಲು ಬಿಡಲ್ಲ. ಮುಂದಿನ ಜನಾಂಗಕ್ಕಾಗಿ ಈ ಹೋರಾಟ ಎಂದು ಕಿಡಿಕಾರಿದ್ದಾರೆ. ಈ ವೇಳೆ ಸಚಿವರು ರೈತರ ವಿರೋಧವಿದೆ ಹಾಗಾಗಿ ಯೋಜನೆ ಬಗ್ಗೆ ಮತ್ತೊಮ್ಮೆ ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.