ಮೋದಿ ಹೆಸರು ದುರ್ಬಳಕೆ: ಬಿಜೆಪಿ ತೊರೆದ ಬೆನ್ನಲ್ಲೇ ಆಯನೂರು ಮಂಜುನಾಥ್ ಕಿಡಿ

ಹುಬ್ಬಳ್ಳಿ: ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೇಳಿದ್ದೆ, ಆದರೆ ಕೊಡಲಿಲ್ಲ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ ಎಂದು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿದ ಆಯನೂರು ಮಂಜುನಾಥ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಕೊಲೆ ಸುಲಿಗೆ ಆಗುತ್ತಿದೆ. ಜಿಲ್ಲೆಯಲ್ಲಿ ಬಡವರ ಕುಟುಂಬ ರಕ್ಷಣೆ ಮಾಡಬೇಕಿದೆ. ಕುಮಾರಸ್ವಾಮಿ ನನ್ನ ನಿಲುವು ಕೇಳಿ ಬಿ ಫಾರಂ ಕೊಟ್ಟಿದ್ದಾರೆ. ನಾನು ಶಿವಮೊಗ್ಗದಲ್ಲಿ ಪ್ರವಾಹದ ವಿರುದ್ಧ ಈಜುತ್ತೇನೆ ಅನಿಸುತ್ತದೆ. ಮೋದಿ ಹೆಸರನ್ನು ಇವರೆಲ್ಲರೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದಕ್ಕೆ ಯಾವ ನೈತಿಕತೆ ಇಲ್ಲ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read