ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಬೈಂದೂರಿನಲ್ಲಿ ಪ್ರಚಾರ ಕೈಗೊಂಡಿದ್ದ ಕೆ.ಎಸ್. ಈಶ್ವರಪ್ಪ ಸುದ್ದಿಗಾರರೊಂದಿಗೆ ತಡೆಯಾಜ್ಞೆ ಬಗ್ಗೆ ಮಾತನಾಡಿ, ನಮ್ಮನ್ನು ಹೇಗಾದರೂ ಮಾಡಿ ಕಣದಿಂದ ಹಿಂದೆ ಸರಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ. ನಮಗೆ ಅಪಮಾನ ಮಾಡಬೇಕೆಂದು ಕುತಂತ್ರ ನಡೆಸಲಾಗುತ್ತಿದ್ದು, ಇಂತಹ ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಹಾಗಾಗಿ ತಡೆಯಾಜ್ಞೆ ತಂದಿದ್ದೇವೆ. ಅದರ ಹೊರತೂ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಮಾತನಾಡಿದ ಈಶ್ವರಪ್ಪ, ಆ ದರಿದ್ರ ವಿಷಯದ ಬಗ್ಗೆ ನಾವ್ಯಾಕೆ ಮಾತನಾಡೋಣ. ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತದೆ. ದೇಶಾದ್ಯಂತ ಜನ ಛೀ, ಥೂ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read