BREAKING: ಕೆ.ಎಸ್.ಆರ್.ಟಿ.ಸಿ ಬಸ್-ಲಾರಿ ಡಿಕ್ಕಿ: ಸ್ಥಳದಲ್ಲೇ ವೃದ್ಧೆ ಸಾವು

ಬೆಳಗಾವಿ: ಕೆ.ಎಸ್.ಆರ‍್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಣಚಿನಮರಡಿ ಬಳಿ ನಡೆದಿದೆ.

ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ (70) ಮೃತ ವೃದ್ಧೆ. ಅಪಘಾತದ ಹೊಡೆತಕ್ಕೆ ಪಲ್ಟಿಯಾಗಿ ಬಿದ್ದ ಬಸ್ ಅಡಿಯಲ್ಲಿ ವೃದ್ಧೆ ಸಿಲುಕಿ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಸಿಲುಕಿದ್ದ ಇತರ ಪ್ರಯಾಣಿಕರು ಕಿಟಕಿ ಗಾಜು ಒಡೆದು ಹೊರಬಂದಿದ್ದಾರೆ.

ಘಟನಾ ಸ್ಥಳಕ್ಕೆ ಗೋಕಾಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read