KSRTC ಬಸ್ ಅಡ್ಡಗಟ್ಟಿ ಪ್ರಯಾಣಿಕರ ಮೇಲೆ ಹಲ್ಲೆ; ಡ್ರೈವರ್, ಕಂಡಕ್ಟರ್ ಗೂ ಥಳಿತ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಅಡ್ಡಗಟ್ಟಿ ನಿಲ್ಲಿಸಿ ವ್ಯಕ್ತಿಯೋರ್ವ ಪ್ರಯಾಣಿಕರು ಹಾಗೂ ಬಸ್ ಚಾಲಕ, ನಿರ್ವಾಹಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ಜಾಂಬಾ ಕ್ರಾಸ್ ಬಳಿ ನಡೆದಿದೆ.

ಶಿರವಾಡದ ಸುಭಾಷ್ ಬಾಡಕರ್ ಎಂಬಾತ ಈ ರೀತಿ ಬಸ್ ಚಾಲಕ, ನಿರ್ವಾಹಕ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ್ದಾನೆ.

ಕಾರವಾರದಿಂದ ಸಿದ್ದರಗೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ್ನು ಜಾಂಬಾ ಕ್ರಾಸ್ ಬಳಿ ರಸ್ತೆಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ತಡೆದಿದ್ದಾನೆ. ದಾರಿ ಬಿಡುವಂತೆ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳುತ್ತಿದ್ದಂತೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬಸ್ ಚಾಲಕ ಹಾಗೂ ನಿರ್ವಾಹಕರು ಕೂಡ ದಾರಿ ಬಿಡಲು ಸೂಚಿಸಿದ್ದಾರೆ.

ಇನ್ನಷ್ಟು ಕೋಪಗೊಂಡ ಸುಭಾಷ್, ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರ ಶರ್ಟ್ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮಹಮ್ಮದ್ ಇಸಾಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರ ಗ್ರಾಮೀಣ ಪೊಲಿಸ್ ಥಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read