KSRTC ಬಸ್ ಟೈರ್ ಸ್ಫೋಟ: ನಿಯಂತ್ರಣ ತಪ್ಪಿ ತಡೆಗೋಡೆಗೆ ಗುದ್ದಿದ ಬಸ್

ದೊಡ್ದಬಳ್ಳಾಪುರ: 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಟೈರ್ ಏಕಾಏಕಿ ಸ್ಫೋಟಗೊಂಡು ತಡೆಗೋಡೆಗೆ ಗುದ್ದಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ನಡೆದಿದೆ.

ಚಲಿಸುತ್ತಿದ್ದ ಬಸ್ ನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ತಡೆಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು, ಚಾಲಕ, ಕಂಡಕ್ಟರ್ ಅಪಾಯದಿಂದ ಪಾರಾಗಿದ್ದಾರೆ.

ಮೆಣಸಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರ ಬಳಿ ಘಟನೆ ನಡೆದಿದೆ. ಸೂಲಿಕುಂಟೆ-ದೊಡ್ದಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ ಟೈರ್ ಸ್ಫೋಟಗೊಳ್ಳುತ್ತಿದ್ದಂತೆ ಚಾಲಕ ಮುನಿಶ್ಯಾಮಪ್ಪ, ಬಸ್ ನ್ನು ತಡೆಗೋಡೆ ಕಡೆಗೆ ತಿರುಗಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read