ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ `KSRTC’ ಚಾಲಕನ ಹುಚ್ಚಾಟ!

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕನೊಬ್ಬ ಹುಚ್ಚಾಟ ಮೆರೆದಿದ್ದು, ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಬಿಡದಿಯ ಶೇಷಗಿರಿಹಳ್ಳಿ ಟೋಲ್ ಬಳಿ ಟೋಲ್ ಕಟ್ಟಲಾಗದೇ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಒನ್ ವೇಯಲ್ಲಿ  ಬಸ್ ಚಲಾಯಿಸಿರುವ ಘಟನೆ ನಡೆದಿದೆ.  KA 10 F 0492 ನಂಬರ್‌ನ ಸಾರಿಗೆ ಬಸ್ ಮೈಸೂರಿನಿಂದ ಬೆಂಗಳೂರಿಗೆ ಹೊರಟ್ಟಿತ್ತು ಟೋಲ್ ಕಟ್ಟದೇ ಬಸ್ ಚಾಲಕ ಹಾಗೂ ನಿರ್ವಾಹಕ ಒನ್ ವೇಯಲ್ಲೇ ಮೈಸೂರು ಕಡೆಗೆ ಮರಳಿದ್ದಾನೆ.

ಟೋಲ್‍ನಿಂದ ಬಿಡದಿಯ ಹನುಮಂತನಗರದವರೆಗೂ ಸುಮಾರು 2 ಕೀ.ಮೀ ಬಸ್ ಒನ್ ವೇಯಲ್ಲೇ ಸಂಚರಿಸಿದೆ. ಬಳಿಕ ಸರ್ವಿಸ್ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಿದೆ. ಬಸ್ ಒನ್‍ವೇಯಲ್ಲಿ ಸಂಚರಿಸುವ ದೃಶ್ಯ ವಾಹನ ಸವಾರರ ಮೊಬೈಲ್‍ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಬಿಡದಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read