BREAKING: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ KSRTC ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಹತ್ತಿದ ಘಟನೆ ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ನಡೆದಿದೆ.

ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ. ಬಸ್ ನ ಬಾಗಿಲು ತೆಗೆಯಲು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ತುರ್ತು ನಿರ್ಗಮನದ ಕಿಟಕಿಯಿಂದ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಅಪಘಾತದಿಂದಾಗಿ ಬಸ್ ನ ಮುಂಭಾಗ ನಜ್ಜುಗುಜ್ಜಾಗಿದೆ.

ಬಸ್ ಮುಂಭಾಗದ ಬಾಗಿಲು ತೆಗೆಯಲಾಗದೆ ಪ್ರಯಾಣಿಕರು ತುರ್ತು ನಿರ್ಗಮನ ಕಿಟಕಿಯಿಂದ ಇಳಿದರು. ಈ ಸಂದರ್ಭದಲ್ಲಿ ಬಿಬಿ ರಸ್ತೆಯ ನಿವಾಸಿ ಸುಬ್ರಹ್ಮಣ್ಯ ಎನ್ನುವವರು ಟಿವಿಎಸ್ ಎಕ್ಸ್ಎಲ್ ನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೂ ಬಸ್ ತಾಗಿದ್ದರಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ.

ಚಾಲಕ ಪ್ರಯಾಣಿಕರನ್ನು ಅಲ್ಲಿಯೇ ಇಳಿಸಿ ನೇರವಾಗಿ ಕೆಎಸ್ಆರ್ಟಿಸಿ ಡಿಪೋಗೆ ಬಸ್ ಚಾಲನೆ ಮಾಡಿಕೊಂಡು ಹೋಗಿದ್ದು, ಪ್ರಯಾಣಿಕರು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read