H.D ಕುಮಾರಸ್ವಾಮಿಗೆ ಬಡವರು, ಹೆಣ್ಣು ಮಕ್ಕಳ ನೋವು ಗೊತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಡವರು, ಹೆಣ್ಣು ಮಕ್ಕಳ ನೋವು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ ಕುಮಾರಸ್ವಾಮಿಗೂ ಗ್ಯಾರಂಟಿ ಗಳಿಗೆ ಏನು ಸಂಬಂಧ..? ಗ್ಯಾರಂಟಿ ಬಗ್ಗೆ ಅವರಿಗೆ ಏನು ಗೊತ್ತಿದೆ. ಅವರಿಗೆ ಪಂಚರತ್ನ ಯೋಜನೆಯನ್ನು ಜಾರಿಗೆ ತರಲು ಆಗಿಲ್ಲ ಎಂದರು.

ಅವರಿಗೆ ಬಡವರ, ಹೆಣ್ಣು ಮಕ್ಕಳ ನೋವು ಗೊತ್ತಿಲ್ಲ. ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ ಎಂದರು.
ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದಾರೆ. ತೆಲಂಗಾಣ ಚುನಾವಣೆಯಲ್ಲಿ 6 ಭರವಸೆ ನೀಡಿದ್ದೇವೆ. ಹೈಕಮಾಂಡ್ ಏನ್ ಹೇಳುತ್ತದೆ. ಅದನ್ನು ನಾವು ಪಾಲಿಸುತ್ತೇವೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read