ಕೋಲಾರ: ಕುರುಡುಮಲೆ ದೇವಾಲಯದಲ್ಲಿ ದುರಂತವೊಂದು ಸಂಭವಿಸಿದೆ. ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಕುಶಾಲ್ ಮೃತ ಬಾಲಕ. ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟ ನಿವಾಸಿ ಎಂದು ತಿಳಿದುಬಂದಿದೆ.
ಪೋಷಕರೊಂದುಗೆ ದೇವಾಲಯಕ್ಕೆ ಬಂದಿದ್ದ ಬಾಲಕ, ಆಟವಾಡುತ್ತಿದ್ದ ವೇಳೆ ಕಲ್ಯಾಣಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮುಳಬಾಗಿಲು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.