ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಒಂದೇ ಸೂರಿನಡಿ ಸರ್ಕಾರದ ಯೋಜನೆಗಳ ಸಮಗ್ರ ಮಾಹಿತಿ ಲಭ್ಯ

ನವದೆಹಲಿ: ಇನ್ನು ಅಸಂಘಟಿತ ಕಾರ್ಮಿಕರಿಗೆ ಒಂದೇ ಸೂರಿನಡಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ದೊರೆಯಲಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯಾ ಸೋಮವಾರ ‘ಇ- ಶ್ರಮ ಒನ್ ಸ್ಟಾಪ್ ಸಲ್ಯೂಷನ್’ಗೆ ಚಾಲನೆ ನೀಡಲಿದ್ದಾರೆ. ಬಜೆಟ್ ನಲ್ಲಿ ಸರ್ಕಾರ ಈ ಯೋಜನೆ ಪ್ರಕಟಿಸಿತ್ತು. ಯೋಜನೆಗಳ ಬಗ್ಗೆ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲು ಇದನ್ನು ರೂಪಿಸಲಾಗಿದೆ.

ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಕುರಿತಾಗಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಈಗಾಗಲೇ ಇ- ಶ್ರಮ ಪೋರ್ಟಲ್ ನಲ್ಲಿ ಕೇಂದ್ರ ಸಚಿವಾಲಯ ಇಲಾಖೆಗಳ 12 ಯೋಜನೆಗಳನ್ನು ಸಂಯೋಜಿಸಲಾಗಿದೆ. ಅಸಂಘಟಿತ ವಲಯದ 30 ಕೋಟಿಗೂ ಹೆಚ್ಚು ಕಾರ್ಮಿಕರು ಇದರಡಿ ನೋಂದಣಿ ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read