alex Certify ಆರ್ಥಿಕತೆ ಸರಿದೂಗಿಸಲು ದಿನಕ್ಕೆ 10 ಗಂಟೆ ಕೆಲಸ ಮಾಡುವಂತೆ ನಾರಾಯಣಮೂರ್ತಿ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಥಿಕತೆ ಸರಿದೂಗಿಸಲು ದಿನಕ್ಕೆ 10 ಗಂಟೆ ಕೆಲಸ ಮಾಡುವಂತೆ ನಾರಾಯಣಮೂರ್ತಿ ಸಲಹೆ

ದೇಶದಲ್ಲಿ ಕರೋನಾ ವೈರಸ್ ಅಬ್ಬರಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 3ಕ್ಕೆ ಲಾಕ್ ಡೌನ್ ಅಂತ್ಯಗೊಳ್ಳಲಿದ್ದು, ಆದರೆ ಕರೋನಾ ನಿಯಂತ್ರಣಕ್ಕೆ ಬಾರದ ಕಾರಣ ಇದನ್ನು ಮತ್ತಷ್ಟು ದಿನಗಳ ಕಾಲ ಮುಂದುವರಿಸುವ ಸಾಧ್ಯತೆ ಇದೆ.

ಇದರ ಮಧ್ಯೆ ಹೆಚ್ಚು ದಿನಗಳ ಕಾಲ ಲಾಕ್ ಡೌನ್ ಮುಂದುವರೆದರೆ ಕರೋನಾ ವೈರಸ್ ನಿಂದ ಸಾವನ್ನಪ್ಪುವವರ ಸಂಖ್ಯೆಗಿಂತ ಹಸಿವಿನಿಂದಲೇ ಹೆಚ್ಚು ಮಂದಿ ಸಾವಿಗೀಡಾಗಬಹುದು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಎಚ್ಚರಿಸಿದ್ದಾರೆ.

ಇದರ ಜೊತೆಗೆ ಸಲಹೆಯೊಂದನ್ನೂ ನಾರಾಯಣಮೂರ್ತಿ ನೀಡಿದ್ದು, ದೇಶದ ಆರ್ಥಿಕತೆ ಚೇತರಿಕೆ ಕಾಣಲು ಭಾರತೀಯರು ಮುಂದಿನ ಎರಡರಿಂದ ಮೂರು ವರ್ಷಗಳ ಕಾಲ ವಾರಕ್ಕೆ 60 ಗಂಟೆಗಳ ಕಾಲ ಅಂದರೆ ದಿನಕ್ಕೆ 10 ಗಂಟೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...