alex Certify ಉದ್ಯೋಗಿಗಳಿಗೆ ಶುಭ ಸುದ್ದಿ: ಬಿಎಂಟಿಸಿ ಆರಂಭಕ್ಕೆ ಸರ್ಕಾರದ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಿಗಳಿಗೆ ಶುಭ ಸುದ್ದಿ: ಬಿಎಂಟಿಸಿ ಆರಂಭಕ್ಕೆ ಸರ್ಕಾರದ ಸಿದ್ಧತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಉದ್ಯೋಗಿಗಳು ತಮ್ಮ ಕೆಲಸದ ಸ್ಥಳಗಳಿಗೆ ತೆರಳಲು ಬಿಎಂಟಿಸಿ ಹಾಗೂ ಮೆಟ್ರೋ ಮೇಲೆ ಅವಲಂಬಿತರಾಗಿದ್ದಾರೆ. ಇದೀಗ ಅವರುಗಳಿಗೆ ಸೋಮವಾರದಿಂದ ಶುಭಸುದ್ದಿ ಸಿಗುವ ಸಾಧ್ಯತೆ ಇದೆ.

ಬಿಎಂಟಿಸಿ ಬಸ್ ಸಂಚಾರ ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಚಿಂತನೆ ನಡೆಸಿದ್ದು, ಹೀಗಾಗಿ ಇದಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಬಿಎಂಟಿಸಿ ನೌಕರರಿಗೆ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಎಂಟಿಸಿ ಸಂಚಾರದ ವೇಳೆ ಪ್ರಯಾಣಿಕರು ಮಾಸ್ಕ್ ಧರಿಸಿರುವಂತೆ ನೋಡಿಕೊಳ್ಳುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಸಂಪೂರ್ಣ ಎಸಿಯಿಂದ ಕಾರ್ಯ ನಿರ್ವಹಿಸುವ ಮೆಟ್ರೋ ರೈಲಿನ ಸಂಚಾರಕ್ಕೆ 4ನೇ ಹಂತದ ಲಾಕ್ ಡೌನ್ ಸಂದರ್ಭದಲ್ಲೂ ಹಸಿರು ನಿಶಾನೆ ಸಿಗುವ ಸಾಧ್ಯತೆ ಇಲ್ಲವೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...