ಮಾರಣಾಂತಿಕ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಇದೀಗ ಲಾಕ್ ಡೌನ್ ನಲ್ಲಿ ಬಹುತೇಕ ಸಡಿಲಿಕೆ ಮಾಡಲಾಗಿದ್ದು, ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ.
ಇದರ ಬೆನ್ನಲ್ಲೇ ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು 10 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರಣಿ ಪತ್ರಿಕಾಗೋಷ್ಠಿಗಳಲ್ಲಿ ಈ ಪ್ಯಾಕೇಜ್ ನ ಸಂಪೂರ್ಣ ಮಾಹಿತಿ ಪ್ರಕಟಿಸಿದ್ದರು.
ಈ ಪ್ಯಾಕೇಜ್ ಷೇರು ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಈ ಮೊದಲು ಇಂತಹ ಘೋಷಣೆಗಳನ್ನು ಮಾಡಿದ ಸಂದರ್ಭದಲ್ಲಿ ಷೇರು ಮಾರುಕಟ್ಟೆ ಜಿಗಿದೇಳುತ್ತಿತ್ತು. ಆದರೆ ಈ ಬಾರಿಯ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಲ್ಲಿ ಬಹುತೇಕ ಸಾಲ ನೀಡುವ ಪ್ರಸ್ತಾವನೆಗಳು ಇರುವುದರಿಂದ ಷೇರು ಮಾರುಕಟ್ಟೆ ನಿರುತ್ಸಾಹ ಹೊಂದಿದ್ದು, ಹೀಗಾಗಿ ಯಾವುದೇ ಚೇತರಿಕೆ ಕಂಡುಬಂದಿಲ್ಲ.