alex Certify ಹಣಕಾಸು ಸಚಿವೆಯೊಂದಿಗೆ ನಾಳೆ ಮೋದಿ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣಕಾಸು ಸಚಿವೆಯೊಂದಿಗೆ ನಾಳೆ ಮೋದಿ ಮಹತ್ವದ ಸಭೆ

शुक्रवार को प्रधानमंत्री की वित्त ...

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭೆ ಮೇಲೆ ಎಲ್ಲರ ಕಣ್ಣಿದೆ. ಕೊರೊನಾ ನಿಯಂತ್ರಣ ಸೇರಿದಂತೆ ಆರ್ಥಿಕ ವೃದ್ಧಿಗೆ ಸಂಬಂಧಿಸಿದ ಕೆಲ ಮಹತ್ವದ ಮಾತುಕತೆ ಸಭೆಯಲ್ಲಿ ನಡೆಯಲಿದೆ.

ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವರು, ಹಣಕಾಸು ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಂಎಸ್‌ಎಂಇಗಳ ಪರಿಹಾರ ಕುರಿತು ಚರ್ಚಿಸಲಾಗುವುದು. ಅದೇ ಸಮಯದಲ್ಲಿ ರೈತರ ಆದಾಯ ಮತ್ತು ಕೃಷಿ ಬಿಕ್ಕಟ್ಟಿನ ಬಗ್ಗೆಯೂ ಪ್ರಧಾನಿ ಚರ್ಚಿಸಲಿದ್ದಾರೆ. ಈ ಸಭೆಯಲ್ಲಿ ಎರಡನೇ ಪರಿಹಾರ ಪ್ಯಾಕೇಜ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗ್ತಿದೆ.

ಎಂಎಸ್‌ಎಂಇಗಳಿಗೆ 20 ಸಾವಿರ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಈ ವಲಯದ ಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ನಿಂದ ತತ್ತರಿಸಿರುವ ಕಾರ್ಮಿಕರಿಗೆ ಪರಿಹಾರ ಒದಗಿಸಲು ಸರ್ಕಾರ  ಮೊದಲೇ 1.7 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಪ್ಯಾಕೇಜ್‌ನಲ್ಲಿ ರೈತರು, ದೈನಂದಿನ ಕೂಲಿ ಕಾರ್ಮಿಕರು, ಎಸ್‌ಎಂಇ ವಲಯಕ್ಕೆ ಹೆಚ್ಚಿನ ಪರಿಹಾರ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...