ಮಾರಣಾಂತಿಕ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ಅಂಗಡಿ – ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ಇದರ ಮಧ್ಯೆ ಮದ್ಯದಂಗಡಿ ತೆರೆಯುವುದು ಯಾವಾಗ ಎಂದು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮದ್ಯ ಪ್ರಿಯರಿಗೆ ನಿರಾಶಾದಾಯಕ ಸುದ್ದಿಯೊಂದು ಇಲ್ಲಿದೆ.
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಮೇ 3 ರ ಬಳಿಕ ಮದ್ಯದಂಗಡಿಗಳನ್ನು ತೆರೆಯಲು ಅನುವು ಮಾಡಿಕೊಡಬಹುದೆಂಬ ನಿರೀಕ್ಷೆ ಹುಸಿಯಾಗುವಂತೆ ಕಾಣುತ್ತಿದೆ. ಆರ್ಥಿಕ ಚಟುವಟಿಕೆ ನಡೆಸಲು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿರುವ ರಾಜ್ಯ ಸರ್ಕಾರ ಮದ್ಯದಂಗಡಿ ವಿಚಾರದಲ್ಲಿ ಮಾತ್ರ ಕಠಿಣ ನಿಲುವು ತಳೆದಿದೆ.
ಇದೀಗ ಅಬಕಾರಿ ಸಚಿವ ಹೆಚ್. ನಾಗೇಶ್ ಮೇ 3 ರ ಬಳಿಕವೂ ಮದ್ಯದಂಗಡಿಗಳು ತೆರೆಯುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ. ಕಡೇ ಪಕ್ಷ ಹಸಿರು ವಲಯದಲ್ಲದರೂ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ಒತ್ತಡ ಬರುತ್ತಿದ್ದರೂ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡುವುದು ಅನುಮಾನವೆಂದು ಹೇಳಲಾಗಿದೆ.