ಕರೋನಾ ಲಾಕ್ ಡೌನ್ ನಿಂದಾಗಿ ಕಂಗೆಟ್ಟಿರುವ ರೇಷ್ಮೆ ಬೆಳಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರೇಷ್ಮೆಗೆ ಹೆಚ್ಚಿನ ದರ ನಿಗದಿ ಮಾಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಅನುಮತಿ ನೀಡಲಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ರೀಲರ್ಸ್ ಮತ್ತು ವ್ಯಾಪಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಚಿವರು, ರೇಷ್ಮೆ ನೂಲು ಬಿಚ್ಚಣಿಕೆದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅಡಮಾನ ಸಾಲ ಮಿತಿಯನ್ನು 1 ಲಕ್ಷದಿಂದ 2 ಲಕ್ಷಕ್ಕೆ ಏರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ಲಾಕ್ ಡೌನ್ ಮುಗಿದ ಬಳಿಕ ಚೀನಾ ಮತ್ತಿತರ ರಾಷ್ಟ್ರಗಳಿಂದ ರೇಷ್ಮೆ ಆಮದಾದರೆ ದರ ಕುಸಿಯಬಹುದು ಎಂಬ ಆತಂಕವನ್ನು ವ್ಯಾಪಾರಿಗಳು ವ್ಯಕ್ತಪಡಿಸಿದ್ದು, ಈ ಕುರಿತು ಚರ್ಚೆ ನಡೆಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.