alex Certify ರೈಲು ಪ್ರಯಾಣಿಕರ ಬಳಿ ಕಡ್ಡಾಯವಾಗಿ ಇರಬೇಕು ಈ ಆಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರ ಬಳಿ ಕಡ್ಡಾಯವಾಗಿ ಇರಬೇಕು ಈ ಆಪ್

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ವಿಮಾನ, ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದೀಗ ಮೂರನೇ ಹಂತದ ಲಾಕ್ ಸಂದರ್ಭದಲ್ಲಿ ಕೆಲವೊಂದು ಸಡಿಲಿಕೆಗಳನ್ನು ಮಾಡಲಾಗಿದ್ದು ರೈಲು ಸಂಚಾರವನ್ನು ಆರಂಭಿಸಲಾಗಿದೆ.

ರೈಲು ಪ್ರಯಾಣಕ್ಕಾಗಿ ಮಾರ್ಗಸೂಚಿ ರೂಪಿಸಲಾಗಿದ್ದು, ಆನ್ ಲೈನ್ ಮೂಲಕ ಟಿಕೆಟ್ ಬುಕ್ ಮಾಡಬೇಕಿದೆ. ಆರಂಭಿಕ ಹಂತದಲ್ಲಿ ಆಯ್ದ ಮಾರ್ಗಗಳಲ್ಲಿ ಮಾತ್ರ ಈ ರೈಲುಗಳು ಸಂಚರಿಸಲಿದ್ದು, ಆರಂಭದ ಮೊದಲ ದಿನವೇ ರೈಲ್ವೆ ಇಲಾಖೆಗೆ ಬರೋಬ್ಬರಿ 16 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಈಗ ಸಂಚಾರ ಆರಂಭಿಸಿರುವ ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು, ತಮ್ಮ ಮೊಬೈಲ್ ನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ‘ಆರೋಗ್ಯ ಸೇತು’ ಆಪ್ ಡೌನ್ಲೋಡ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಅಲ್ಲದೆ ಪ್ರಯಾಣಿಕರು ಆಹಾರ ಮತ್ತು ಹೊದಿಕೆಯಂತ ಅಗತ್ಯ ವಸ್ತುಗಳನ್ನು ತಮ್ಮ ಜೊತೆಗೆ ತರಬೇಕೆಂದು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...