alex Certify ಲಾಕ್‌ ಡೌನ್‌ ಮುಗಿದ ಬಳಿಕ ವಾಹನ ಸವಾರರಿಗೆ ʼಬಂಪರ್‌ʼ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್‌ ಡೌನ್‌ ಮುಗಿದ ಬಳಿಕ ವಾಹನ ಸವಾರರಿಗೆ ʼಬಂಪರ್‌ʼ ಸುದ್ದಿ

ಮಾರಣಾಂತಿಕ ಕರೋನಾ ವೈರಸ್‌ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ. ಮೇ 3 ರಂದು ಲಾಕ್‌ ಡೌನ್‌ ಪೂರ್ಣಗೊಳ್ಳಲಿದ್ದು, ಇದಾದ ಬಳಿಕ ವಾಹನ ಸವಾರರಿಗೆ ಭರ್ಜರಿ ಬಂಪರ್‌ ಸುದ್ದಿ ಸಿಗುವ ನಿರೀಕ್ಷೆಯಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್‌ ಗೆ 20 ಡಾಲರ್‌ ಗಿಂತಲೂ ಕೆಳಕ್ಕೆ ಕುಸಿದಿದ್ದು, ಹೀಗಾಗಿ ಇದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ದರದ ಏರಿಳಿತಕ್ಕನುಗುಣವಾಗಿ ಭಾರತದ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯನ್ನು ನಿಗದಿಪಡಿಸುತ್ತವೆ. ಆದರೆ ಈಗ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕುಸಿದಿದ್ದರೂ ಅದರ ಲಾಭ ವಾಹನ ಸವಾರರಿಗೆ ಸಿಕ್ಕಿರಲಿಲ್ಲ.

ಇದೀಗ ಕೇಂದ್ರ ಸರ್ಕಾರ, ಲಾಕ್‌ ಡೌನ್‌ ಅವಧಿ ಮುಗಿದ ಬಳಿಕ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಇದರ ಪರಿಣಾಮ ದೇಶದಲ್ಲಿ ಪೆಟ್ರೋಲ್‌ ಹಾಗೂ ಡಿಸೇಲ್‌ ದರದಲ್ಲಿ ಇಳಿಕೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...