ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕರೋನಾ ಮಹಾಮಾರಿಗೆ ಈಗಾಗಲೇ 29 ಮಂದಿ ಬಲಿಯಾಗಿದ್ದು, 600 ಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ.
ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ವ್ಯಾಪಾರ ವಹಿವಾಟಿಲ್ಲದೆ ಸಾರ್ವಜನಿಕರು ಕಂಗಾಲಾಗಿ ಹೋಗಿದ್ದಾರೆ.
ಹೀಗಾಗಿ ಕೆಲವೊಂದು ವಲಯಗಳಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ಘೋಷಿಸಿದ್ದು, ಇದೀಗ ಬಡ ನೇಕಾರರ ಖಾತೆಗೆ ನೇಕಾರ ಸಮ್ಮಾನ ಯೋಜನೆ ಅಡಿಯಲ್ಲಿ 2 ಸಾವಿರ ರೂಪಾಯಿ ನೀಡಲು ಮುಂದಾಗಿದೆ ಎಂದು ಹೇಳಲಾಗಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.