ಲಾಕ್ ಡೌನ್ ನಿಂದಾಗಿ ಮದ್ಯದಂಗಡಿಗಳು ತೆರೆದಿರಲಿಲ್ಲ. ಆದರೆ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಒಂದಿಷ್ಟು ವಿನಾಯಿತಿ ನೀಡಲಾಗಿದ್ದು ಮದ್ಯದ ಅಂಗಡಿಗಳನ್ನು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಆದರೆ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ ಅವಕಾಶ ನೀಡಿಲ್ಲ. ಇದೀಗ ನಮಗೂ ಅವಕಾಶ ನೀಡಿ ಎಂದು ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸರ್ಕಾರದ ಮುಂದೆ ಮನವಿ ಮಾಡುತ್ತಿದ್ದಾರೆ.
ಹೌದು, ರಾಜ್ಯದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಬಾರ್ ಗಳು ತೆರೆದಿವೆ. ಷರತ್ತು ಹಾಕಿ ಬಾರ್ ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ನಮಗೂ ತೆರೆಯಲು ಅವಕಾಶ ಕೊಡಿ ಅಂತ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.
ಒಂದೂವರೆ ತಿಂಗಳಿಂದ ನಾವು ಕಷ್ಟದಲ್ಲಿ ಇದ್ದೇವೆ. ಮನೆ ಹಾಗೂ ಅಂಗಡಿಗಳ ಬಾಡಿಗೆ ಕಟ್ಟಬೇಕು, ಸಾಲ ಮಾಡಿದ್ದೇವೆ. ಕೆಲಸಗಾರರಿಗೆ ಸಂಬಳ ಕೊಡಬೇಕು. ನಷ್ಟ ಅನುಭವಿಸಿದ್ದೇವೆ. ನಮಗೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ಬಾರ್ ಅಂಡ್ ರೆಸ್ಟೊರೆಂಟ್ ನ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಮಾಡಿದೆ.
ರಾಜ್ಯದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಾಗಿ ಔಟ್ ಲೆಟ್ ಗಳಿಗಿಂತ ಹೆಚ್ಚಿನ ತೆರಿಗೆ ಕಟ್ಟುತ್ತೇವೆ. ನಮಗೂ ಷರತ್ತು ಬದ್ದ ಅನುಮತಿಯನ್ನು ನೀಡಿ. ಷರತ್ತುಗಳನ್ನು ಪಾಲಿಸುತ್ತೇವೆ ಎಂದಿದ್ದಾರೆ. ಇವರ ಮನವಿಗೆ ಸರ್ಕಾರ ಸ್ಪಂದನೆ ಮಾಡಿ ಷರತ್ತುಬದ್ದವಾಗಿ ಅಂಗಡಿ ತೆರೆಯಲು ಅವಕಾಶ ನೀಡುತ್ತಾ ಅಂತಾ ಕಾದು ನೋಡಬೇಕು.