alex Certify ಸಾರ್ವಜನಿಕ ‘ಸಾರಿಗೆ’ ಏರಲು ಭಯ ಬೀಳುತ್ತಿದ್ದಾರೆ ಜನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ‘ಸಾರಿಗೆ’ ಏರಲು ಭಯ ಬೀಳುತ್ತಿದ್ದಾರೆ ಜನ…!

ದೇಶದಲ್ಲಿ ಐದನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದರೂ ಸಹ ಸಾರ್ವಜನಿಕ ಸಾರಿಗೆ ಆರಂಭಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಸರ್ಕಾರಿ ಸಾರಿಗೆ ಎಂದಿನಂತೆ ಆರಂಭವಾದರೂ ಸಹ ಆಟೋ-ಟ್ಯಾಕ್ಸಿ ಹೊರತುಪಡಿಸಿ ಖಾಸಗಿ ಬಸ್ ವ್ಯವಸ್ಥೆ ಮಾತ್ರ ಬೆರಳೆಣಿಕೆಯಷ್ಟು ಆರಂಭವಾಗಿದೆ.

ಕೊರೊನಾ ಸೋಂಕು ತಗುಲುವ ಭೀತಿಯಿಂದ ಸಾರ್ವಜನಿಕ ಸಾರಿಗೆ ಏರಲು ಜನ ಭಯಪಡುತ್ತಿದ್ದು, ಹೀಗಾಗಿ ಈ ಸೇವೆಗಳು ಆರಂಭವಾಗಿದ್ದರೂ ಸಹ ನಷ್ಟದಲ್ಲಿ ನಡೆಯುವಂತಾಗಿದೆ. ಜನ ಸಾರ್ವಜನಿಕ ಸಾರಿಗೆ ಬದಲು ಸಂಚಾರಕ್ಕೆ ಸ್ವಂತ ವಾಹನಗಳನ್ನು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ.

ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಈ ವಿಷಯವನ್ನು ಖಚಿತಪಡಿಸಿದ್ದು, ಸಾರ್ವಜನಿಕ ಸಾರಿಗೆ ಬಳಕೆ ಶೇಕಡ 90ರಷ್ಟು ಕುಸಿತ ಕಂಡಿದೆ ಎಂದು ತಿಳಿಸಿದೆ. ಜನ ಸ್ವಂತ ವಾಹನಗಳ ಬಳಕೆಯತ್ತ ಚಿತ್ತ ಹರಿಸಿರುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ವಲಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...