ತಮ್ಮದೇ ಆದ ಸ್ವಂತ ಸೂರು ಹೊಂದಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಆದರೆ ಇಂದಿನ ದುಬಾರಿ ದಿನಗಳಲ್ಲಿ ಈ ಕನಸು ಎಲ್ಲರಿಗೂ ನನಸಾಗುವುದಿಲ್ಲ. ಇದೀಗ ವಸತಿ ಸಚಿವ ವಿ. ಸೋಮಣ್ಣ ನೀಡಿರುವ ಒಂದು ಹೇಳಿಕೆ ಗಮನ ಸೆಳೆದಿದೆ.
ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 10 ಲಕ್ಷ ಮನೆ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಬಡಜನತೆಗೆ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಅಲ್ಲದೆ ಆರ್ಥಿಕ ದುರ್ಬಲರು ಹಾಗೂ ಮಧ್ಯಮ ವರ್ಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 1.20 ಲಕ್ಷ ನಿವೇಶನಗಳನ್ನು ವಿತರಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯಿರುವ ಸೂರ್ಯ ನಗರದಲ್ಲಿ 30 ಸಾವಿರ ನಿವೇಶನಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.