alex Certify ಎರಡು ದಿನಗಳ ಕಾಲ ಬ್ಯಾಂಕ್‌ ಮುಷ್ಕರ: ಈ ದಿನಗಳಂದು ವಹಿವಾಟಿನ ಮೇಲಾಗಲಿದೆ ಪರಿಣಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ದಿನಗಳ ಕಾಲ ಬ್ಯಾಂಕ್‌ ಮುಷ್ಕರ: ಈ ದಿನಗಳಂದು ವಹಿವಾಟಿನ ಮೇಲಾಗಲಿದೆ ಪರಿಣಾಮ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್​ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿದ್ದು ಇದರಿಂದಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್​ ಹೇಳಿದೆ. ರಾಷ್ಟ್ರೀಯ ಬ್ಯಾಂಕ್​ ಒಕ್ಕೂಟ ಮಾರ್ಚ್​ 15-16ರಂದು ಮುಷ್ಕರಕ್ಕೆ ಕರೆ ನೀಡಿವೆ.

ಭಾರತೀಯ ಬ್ಯಾಂಕ್​ ಒಕ್ಕೂಟ ಮಾರ್ಚ್ 15 ಹಾಗೂ 16ರಂದು ಮುಷ್ಕರಕ್ಕೆ ಕರೆ ನೀಡಿದೆ. ಈ ಸಂದರ್ಭದಲ್ಲಿ ಗ್ರಾಹಕರಿಗೆ ಬ್ಯಾಂಕ್​ ಸೇವೆಗಳು ಲಭ್ಯ ಇರೋದಿಲ್ಲ ಎಂದು ಕೆನರಾ ಬ್ಯಾಂಕ್​ ರೆಗ್ಯೂಲೇಟರಿ ಫೈಲಿಂಗ್​ನಲ್ಲಿ ಮಾಹಿತಿ ನೀಡಿದೆ.

ಮುಷ್ಕರದ ದಿನಗಳಲ್ಲಿ ಬ್ಯಾಂಕ್​ ಶಾಖೆಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ತಿದೆ ಎಂದು ಕೆನರಾ ಬ್ಯಾಂಕ್​ ತಿಳಿಸಿದೆ. ಆದರೆ ಮುಷ್ಕರ ಕಾರ್ಯರೂಪಕ್ಕೆ ಬಂದಲ್ಲಿ ಅದು ಶಾಖೆಗಳು ಹಾಗೂ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...