ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 3 ನೇ ದಿನದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕೃಷಿ ಮಾರುಕಟ್ಟೆಯಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಮಿತಿ ಇರುವುದಿಲ್ಲ. ಎಪಿಎಂಸಿಯಲ್ಲಿ ಮಾರಾಟ ಮಾಡಬೇಕೆಂಬ ನಿಯಮವಿಲ್ಲ. ರೈತರಿಗೆ ತಮಗೆ ಇಷ್ಟವಾದ ಮಾರುಕಟ್ಟೆಯಲ್ಲಿ ಉತ್ಪನ್ನ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಎಪಿಎಂಸಿಯಲ್ಲಿ ಪರವಾನಿಗೆ ಹೊಂದಿದವರಿಗೆ ಅವಕಾಶ ನೀಡಲಾಗಿದ್ದು ಇದರಿಂದ ಬೇಕಾಬಿಟ್ಟಿ ಬೆಲೆಗೆ ಖರೀದಿ ಮಾಡುವವರಿಗೆ ಕಡಿವಾಣ ಹಾಕಬಹುದು. ಅಂತರರಾಜ್ಯ ಮುಕ್ತ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು ಕೈಗಾರಿಕೆ ಉತ್ಪನ್ನ ಮಾರಾಟಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ. ಇ- ಟ್ರೇಡಿಂಗ್ ಮೂಲಕ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಯಾವುದೇ ಸುಂಕವಿಲ್ಲದೆ ಮಾರಾಟ ಮಾಡಬಹುದಾಗಿದೆ. ಬಿತ್ತನೆಗೂ ಮೊದಲೇ ಬೆಳೆಗೆ ಅಂದಾಜು ಬೆಲೆ ಖರೀದಿಸುವ ರೀಟೇಲರ್ ಗಳಿಗೆ ಅವಕಾಶ ನೀಡಲಾಗುವುದು. ಅತಿ ಹೆಚ್ಚು ಬೆಲೆ ನೀಡುವವರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.