ಎಪಿಎಂಸಿ ಕಾಯ್ದೆಯ ರೀತಿಯಲ್ಲಿ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಖಾಸಗಿಗೆ ಅನುಕೂಲ ಕಲ್ಪಿಸಲು ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಉದ್ಯಮಿಗಳಿಗೆ ಅನುಕೂಲವಾಗುವಂತಹ ಕಾಯ್ದೆಯನ್ನು ತರಲು ಸರ್ಕಾರ ಮುಂದಾಗಿದೆ. ವಿದ್ಯುತ್ ಪೂರೈಕೆಯನ್ನು ಖಾಸಗಿ ಫ್ರಾಂಚೈಸಿಗಳಿಗೆ ನೀಡಲಿದ್ದು ಸಬ್ಸಿಡಿಯನ್ನು ನೀಡುವ ಬಗ್ಗೆ ಮತ್ತೊಮ್ಮೆ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯುತ್ ಕಾಯ್ದೆ 2003 ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಏಪ್ರಿಲ್ 17ರಂದು ಎಲ್ಲ ರಾಜ್ಯಗಳಿಗೆ ಕರಡು ಪ್ರತಿ ರವಾನಿಸಿದೆ. ಇದಕ್ಕೆ ಅನೇಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಚರ್ಚೆ ನಡೆಸದೆ ಕಾಯ್ದೆ ತಿದ್ದುಪಡಿ ಜಾರಿಗೆ ಮುಂದಾಗಿದೆ ಎನ್ನಲಾಗಿದೆ.
ಕಾಯ್ದೆ ಜಾರಿಯಾದಲ್ಲಿ ಮುಂದಿನ ದಿನಗಳಲ್ಲಿ ರೈತರಿಗೆ ಸಬ್ಸಿಡಿ ಹಾಗೂ ಉಚಿತವಾಗಿ ಸಿಗುವ ವಿದ್ಯುತ್ ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರೈತರು ಮತ್ತು ಗ್ರಾಹಕರ ಹಿತಾಸಕ್ತಿಗೆ ಮಾರಕವಾಗಿರುವ ಕಾಯ್ದೆಯನ್ನು ಕೈಬಿಡಬೇಕೆಂಬ ಒತ್ತಾಯ ಕೇಳಿಬಂದಿದೆ.
ಸಣ್ಣ ಕೈಗಾರಿಕೆಗಳಿಗೂ ಇದರಿಂದ ತೊಂದರೆಯಾಗಲಿದೆ. ರಿಯಾಯಿತಿ ದರದ ವಿದ್ಯುತ್ ಪೂರೈಕೆಗೆ ನಿಲ್ಲಲಿದೆ. ಕೃಷಿ ಚಟುವಟಿಕೆಗಳಿಗೆ ಉಚಿತ ವಿದ್ಯುತ್ ಪೂರೈಕೆ ನಿಲ್ಲಲಿದ್ದು, ಹೊಸ ಕಾಯ್ದೆ ಜಾರಿಯಾದರೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾಗಲಿದೆ. ತಿದ್ದುಪಡಿ ಕಾಯ್ದೆ ಜಾರಿಗೆ ಬಂದರೆ ಎಲ್ಲಾ ವರ್ಗದ ಗ್ರಾಹಕರ ವಿದ್ಯುತ್ ಶುಲ್ಕವನ್ನು ಪಾವತಿಸಬೇಕು ಎಂದು ಹೇಳಲಾಗಿದೆ. ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿವಿಧ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿದೆ. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರವನ್ನು ಬಂದಿದೆ ಎಂದು ಆರೋಪಿಸಲಾಗಿದೆ.