alex Certify ಹಿರಿಯ ನಾಗರಿಕ ಸ್ನೇಹಿಯಾಗಲಿದೆ `ಅನ್ನಭಾಗ್ಯ’ : 75 ವರ್ಷ ದಾಟಿದವರ ಮನೆಗೆ ತಲುಪಲಿದೆ ಪಡಿತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕ ಸ್ನೇಹಿಯಾಗಲಿದೆ `ಅನ್ನಭಾಗ್ಯ’ : 75 ವರ್ಷ ದಾಟಿದವರ ಮನೆಗೆ ತಲುಪಲಿದೆ ಪಡಿತರ

ಬೆಂಗಳೂರು  : ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ಒಂಟಿ ವೃದ್ಧರು, 75 ದಾಟಿದ ದಂಪತಿಗಳಿಗೆ ಮೊದಲ ಪ್ರಾಶಸ್ತ್ಯ ನೀಡುತ್ತಿದೆ.

ಹೌದು, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಮದ ಆಹಾರ ಇಲಾಕೆ ಕ್ರಮ ಕೈಗೊಂಡಿದ್ದು, ಪಡಿತರ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರೊಬ್ಬರು ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋಮೆಟ್ರಿಕ್ ನೀಡಿದ ನಂತರ ತಮ್ಮ  ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಸೇರಿ ಪಡಿತರ ಪಡೆದುಕೊಳ್ಳಬೇಕಿದೆ. ಹಿರಿಯರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಹೋಗಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಯೋಜನೆ ರೂಪಿಸಲಾಗಿದೆ.

ಪಡಿತರ ಚೀಟಿಯಲ್ಲಿ ನಮೂದಿಸಿದಂತೆ 75 ವರ್ಷ ಒಳಗಿನ ಸದಸ್ಯರು ಇಲ್ಲವೆ, 75 ವರ್ಷದ ದಾಟಿದ ವೃದ್ಧರು, ದಂಪತಿಗಳಿಗೆ ಮನೆ ಬಾಗಿಲಿಗೆ ಪಡಿತರ ಪೂರೈಸಲು ಆಹಾರ ಇಲಾಖೆ ಮುಂದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...