alex Certify ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯವಸ್ಥೆಯಡಿ ಒಳಪಡದ ಕಾರಣ ಖರೀದಿ ಕೇಂದ್ರ ಅನುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯವಸ್ಥೆಯಡಿ ಒಳಪಡದ ಕಾರಣ ಖರೀದಿ ಕೇಂದ್ರ ಅನುಮಾನ

ಚಿತ್ರದುರ್ಗ: ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹೊಲದಲ್ಲಿದ್ದ ಬೆಳೆ ಹಾಳಾಗಿದೆ. ಕೈಗೆ ಅಲ್ಪಸ್ವಲ್ಪ ಬೆಳೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದರೆ, ಈ ಬಾರಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಅನುಮಾನ ಎಂದು ಹೇಳಲಾಗಿದೆ.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮತ್ತು ಕೈಗಾರಿಕ ಮೇಳ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಡಿತರ ವ್ಯವಸ್ಥೆಯಡಿ ಮೆಕ್ಕೆಜೋಳ ಒಳಪಡದ ಕಾರಣ ಖರೀದಿ ಕೇಂದ್ರ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯಲಾಗಿದೆ. ಖರೀದಿ ಕೇಂದ್ರಕ್ಕೆ ಅವಕಾಶ ನೀಡಬೇಕೆಂದು ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಪಡಿತರ ವ್ಯವಸ್ಥೆಗೆ ಒಳಪಡದೆ ಇರುವುದರಿಂದ ಖರೀದಿ ಕೇಂದ್ರ ತೆರೆಯುವುದು ಅನುಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಸೆಂಬರ್ ನಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಇದರೊಂದಿಗೆ ತೊಗರಿ ಖರೀದಿ ಕೇಂದ್ರ ತೆರೆಯಲು ಪರಿಶೀಲನೆ ನಡೆಸಲಾಗಿದೆ. ಚುನಾವಣೆ ಮುಗಿದ ನಂತರ ಸಿಎಂ ಜೊತೆಗೆ ರೈತ ಮುಖಂಡರ ಸಭೆ ನಡೆಸಿ ಬೆಂಬಲ ಬೆಲೆ, ಖರೀದಿ ಕೇಂದ್ರ ಮತ್ತು ಬೆಳೆವಿಮೆ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...