ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದು, ಆರ್ಥಿಕತೆಗೆ ಬೂಸ್ಟರ್ ನೀಡುವ ಸಾಧ್ಯತೆ ಇದೆ.
ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆ ಮಾಡುವ ಸಾಧ್ಯತೆ ಇದೆ. ಆದಾಯ ತೆರಿಗೆ ವಿನಾಯಿತಿ ಮಿತಿ ಸದ್ಯಕ್ಕೆ 2.5 ಲಕ್ಷ ರೂ. ಇದ್ದು ಇದನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ. ಬ್ಯಾಂಕ್ ಠೇವಣಿಗಳ ಬಡ್ಡಿದರ ಇಳಿಕೆಯಾಗಿರುವುದರಿಂದ ಬಡ್ಡಿ ಮೇಲಿನ ತೆರಿಗೆಯ ಹೆಚ್ಚುವರಿ ವಿನಾಯಿತಿ ನಿರೀಕ್ಷೆಯಲ್ಲಿ ಹಿರಿಯ ನಾಗರಿಕರಿದ್ದು, ಇದರ ಬಗ್ಗೆಯೂ ಬಜೆಟ್ನಲ್ಲಿ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ.
ಸಾಲದ ಬಡ್ಡಿ ಪಾವತಿ ಮೇಲಿನ ತೆರಿಗೆ ತೆರಿಗೆ ಕಡಿತ ಮಿತಿ 2 ಲಕ್ಷ ರೂ.ನಿಂದ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಗೃಹ ಸಾಲ ತೆರಿಗೆ ಲಾಭ ಸಿಗುವ ಸಾಧ್ಯತೆ ಇದೆ.
5 ರಾಜ್ಯಗಳ ಚುನಾವಣೆ ನಡೆಯುತ್ತಿರುವುದರಿಂದ ಬಜೆಟ್ ನಲ್ಲಿ ಜನಪ್ರಿಯ ಕೊಡುಗೆ ಘೋಷಣೆಯಾಗಬಹುದು ಎಂದು ಹೇಳಲಾಗಿದೆ.