alex Certify ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೆರಿದ ಕಾರಣ ಈರುಳ್ಳಿ ರಫ್ತು ಮೇಲೆ ನಿರ್ಬಂಧ ಹೇರಲಾಗಿತ್ತು. ಈಗ ಬೆಲೆಯಲ್ಲಿ ಇಳಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ರಫ್ತು ನಿಷೇಧ ಹಿಂಪಡೆದುಕೊಂಡಿದೆ.

ಕಳೆದ ಕೆಲವು ವಾರಗಳಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಕುಸಿಯತೊಡಗಿದ್ದು, ಜನವರಿ 1 ರಿಂದ ಜಾರಿಗೆ ಬರುವಂತೆ ಎಲ್ಲಾ ಬಗೆಯ ಈರುಳ್ಳಿ ರಫ್ತು ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಈರುಳ್ಳಿ ರಫ್ತು ಮಾಡಲು ಅವಕಾಶ ನೀಡುವುದಾಗಿ ತಿಳಿಸಲಾಗಿದೆ.

ಬೆಂಗಳೂರು ಗುಲಾಬಿ ಮತ್ತು ಕೃಷ್ಣಪುರಂ ಸೇರಿದಂತೆ ಎಲ್ಲ ಈರುಳ್ಳಿಯ ತಳಿಗಳನ್ನು ರಫ್ತು ಮಾಡಬಹುದು. ಕಚ್ಚಾ ಈರುಳ್ಳಿಯ ಹೊರತಾಗಿ ಕತ್ತರಿಸಿದ ಮತ್ತು ಕತ್ತರಿಸಿದ ಪುಡಿ ರೂಪದ ಈರುಳ್ಳಿಯನ್ನು ರಫ್ತು ಮಾಡಬಹುದು. ರಾಷ್ಟ್ರರಾಜಧಾನಿಯಲ್ಲಿ ಈರುಳ್ಳಿ ಚಿಲ್ಲರೆ ಮಾರಾಟದ ಬೆಲೆ ಕೆಜಿಗೆ 35ರಿಂದ 40 ರೂಪಾಯಿ ಇದೆ. ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕರ್ನಾಟಕ ಭಾರತದಲ್ಲಿ ಈರುಳ್ಳಿ ಬೆಳೆಯುವ ಪ್ರಮುಖ 3 ರಾಜ್ಯಗಳಾಗಿವೆ. ಭಾರತ ಈರುಳ್ಳಿ ರಫ್ತು ಮಾಡುವ ಬೃಹತ್ ರಾಷ್ಟ್ರವಾಗಿದೆ. ನೇಪಾಳ ಮತ್ತು ಬಾಂಗ್ಲಾದೇಶದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ರಫ್ತು ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...