alex Certify ರಸಗೊಬ್ಬರ ಬೆಲೆ ಏರಿಕೆ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಯಥಾಸ್ಥಿತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸಗೊಬ್ಬರ ಬೆಲೆ ಏರಿಕೆ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಯಥಾಸ್ಥಿತಿಗೆ ಆದೇಶ

ನವದೆಹಲಿ: ರಸಗೊಬ್ಬರ ಉತ್ಪಾದನೆ ಕಂಪನಿಗಳು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡದಂತೆ ಕಂಪನಿಗಳಿಗೆ ನಿರ್ದೇಶನ ನೀಡಿದೆ.

ಯೂರಿಯಾ ರಹಿತ ರಸಗೊಬ್ಬರಗಳ ಎಂ.ಆರ್.ಪಿ.ಯನ್ನು ಹೆಚ್ಚಳ ಮಾಡದಂತೆ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಕಂಪನಿಗಳಿಗೆ ಸೂಚಿಸಿದ್ದು, ಹಳೆಯ ದರದಲ್ಲಿ ಮಾರಾಟ ಮಾಡುವಂತೆ ತಾಕೀತು ಮಾಡಿದೆ. ಯೂರಿಯಾ ರಹಿತ ರಸಗೊಬ್ಬರ ಡಿಎಪಿಯ ಗರಿಷ್ಠ ಚಿಲ್ಲರೆ ಮಾರಾಟ ಬೆಲೆ(ಎಂ.ಆರ್.ಪಿ.) ಹೆಚ್ಚಳ ಮಾಡದಂತೆ ಕೇಂದ್ರ ಸರ್ಕಾರದಿಂದ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.

ಜಾಗತಿಕ ಮಾರುಕಟ್ಟೆಗೆ ಅನುಗುಣವಾಗಿ ಯೂರಿಯಾ ಅಲ್ಲದ ಪೋಷಕಾಂಶಗಳ ದೇಶಿಯ ಚಿಲ್ಲರೆ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ. ಯೂರಿಯಾ ಅಲ್ಲದ ರಸಗೊಬ್ಬರಗಳಾದ ಡಿಎಪಿ, ಎನ್.ಪಿ.ಕೆ., ಎಂಒಪಿ ಬೆಲೆಯನ್ನು ತಯಾರಕರು ನಿರ್ಧರಿಸುತ್ತಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ ನಿಗದಿತ ಸಬ್ಸಿಡಿ ನೀಡುತ್ತದೆ.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರು ಈ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿ ರಸಗೊಬ್ಬರ ಕಂಪನಿಗಳಿಗೆ ಡಿಎಪಿ, ಎನ್.ಪಿ.ಕೆ., ಎಂಒಪಿ ಬೆಲೆಯನ್ನು ಹೆಚ್ಚಳ ಮಾಡದಂತೆ ನಿರ್ದೇಶನ ನೀಡಿದ್ದು, ಇದಕ್ಕೆ ಕಂಪನಿಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ. ಹಳೆಯ ದರದಲ್ಲಿ ಗೊಬ್ಬರ ಮಾರಾಟ ಮಾಡಲು ತಿಳಿಸಲಾಗಿದೆ. ರೈತರು ಹಳೆಯ ದರದಲ್ಲಿ ರಸಗೊಬ್ಬರ ಖರೀದಿಸಬಹುದಾಗಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ರಸಗೊಬ್ಬರ ಕಂಪನಿಗಳು ಭಾರಿ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದವು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...