alex Certify ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮೆ ಸೌಲಭ್ಯಕ್ಕೆ ನೋಂದಾಯಿಸಲು ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮೆ ಸೌಲಭ್ಯಕ್ಕೆ ನೋಂದಾಯಿಸಲು ಸಲಹೆ

ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಬೆಳೆಸಾಲ ಪಡೆದ ರೈತರಿಗೆ ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ಇಚ್ಚೆಯುಳ್ಳ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ ಸಂಖ್ಯೆಯನ್ನು ನೀಡಿ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಾಯಿಸಿಕೊಳ್ಳಬೇಕು.

ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ಜಿಲ್ಲೆಯಲ್ಲಿ ಅಧಿಸೂಚನೆಗೊಂಡ ಬೆಳೆಗಳ ಪೈಕಿ ಚನ್ನಗಿರಿ ತಾಲ್ಲೂಕಿನಲ್ಲಿ ಜೋಳ ಮತ್ತು ಸೂರ್ಯಕಾಂತಿ ಹಿಂಗಾರು ಹಂಗಾಮು ಆದರೆ ಭತ್ತ ಬೇಸಿಗೆ ಹಂಗಾಮಿಗೆ ಒಳಪಡುತ್ತದೆ. ಹಾಗೆಯೇ ಜಗಳೂರು ತಾಲ್ಲೂಕಿನಲ್ಲಿ ಮುಸುಕಿನ ಜೋಳ, ಕಡಲೆ, ಈರುಳ್ಳಿ, ರಾಗಿ, ನೀರಾವರಿ ಹಾಗೂ ಮಳೆ ಆಶ್ರಿತ ಜೋಳ, ಸೂರ್ಯಕಾಂತಿ(ನೀ), ಸೂರ್ಯಕಾಂತಿ(ಮ.ಆ), ಟೊಮ್ಯಾಟೊ ಹಿಂಗಾರು ಹಂಗಾಮು ಬೆಳೆಗಳಾದರೆ, ಶೇಂಗಾ ಬೇಸಿಗೆ ಹಂಗಾಮು ಬೆಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ ಸೂರ್ಯಕಾಂತಿ, ಜೋಳ, ರಾಗಿ, ಮುಸುಕಿನ ಜೋಳ, ಟೊಮ್ಯಾಟೊ ಹಿಂಗಾರು ಹಂಗಾಮು ಬೆಳೆಯಾದರೆ ಟೊಮ್ಯಾಟೊ, ಶೇಂಗಾ ಬೇಸಿಗೆ ಹಂಗಾಮು ಬೆಳೆಗಳಾಗಿವೆ. ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಜೋಳ, ಸೂರ್ಯಕಾಂತಿ, ಹುರುಳಿ, ಕಡಲೆ, ಮುಸುಕಿನ ಜೋಳ ಹಿಂಗಾರು ಹಂಗಾಮು ಬೆಳೆಯಾದರೇ ಭತ್ತ, ಶೇಂಗಾ, ಸೂರ್ಯಕಾಂತಿ ಬೇಸಿಗೆ ಹಂಗಾಮು ಬೆಳೆಗಳಾಗಿವೆ. ಹರಿಹರ ತಾಲ್ಲೂಕಿನಲ್ಲಿ ಜೋಳ(ನೀ), ಜೋಳ(ಮ.ಆ), ಸೂರ್ಯಕಾಂತಿ(ನೀ), ಸೂರ್ಯಕಾಂತಿ(ಮ.ಆ) ಹಿಂಗಾರು ಹಂಗಾಮು ಬೆಳೆಗಳಾದರೆ  ಭತ್ತ, ಶೇಂಗಾ ಬೇಸಿಗೆ ಹಂಗಾಮು ಬೆಳಗಳಾಗಿವೆ.

ಹಿಂಗಾರು ಹಂಗಾಮಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಮೆಕ್ಕೆಜೋಳ, ಸೂರ್ಯಕಾಂತಿ, ಹುರುಳಿ, ರಾಗಿ, ಜೋಳ ಬೆಳೆಗಳಿಗೆ ಬೆಳೆ ವಿಮೆಗೆ ನೋಂದಾಯಿಸಲು ನ.15 ಕೊನೆ ದಿನವಾಗಿದ್ದು, ಈರುಳ್ಳಿ, ಟೊಮ್ಯಾಟೋ ಬೆಳೆಗಳಿಗೆ ನ.30. ಹಾಗೂ ಕಡಲೆ ಬೆಳೆಗೆ ಡಿ.16 ರಂದು ಬೆಳೆ ವಿಮೆಗೆ ನೊಂದಾಯಿಸಲು ಕೊನೆ ದಿನವಾಗಿರುತ್ತದೆ.

ಬೇಸಿಗೆ ಹಂಗಾಮಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಭತ್ತ, ಶೇಂಗಾ, ಸೂರ್ಯಕಾಂತಿ, ಟೊಮ್ಯಾಟೋ ಬೆಳೆ ವಿಮೆಗೆ ನೋಂದಾಯಿಸಲು 2022 ರ ಫೆ.28 ಕೊನೆಯ ದಿನವಾಗಿದೆ.

ರೈತರು ಅರ್ಜಿಯೊಂದಿಗೆ ಆಧಾರ್ ಸಂಖ್ಯೆ ನಮೂದಿಸಿ, ನಿಗದಿತ ದಿನಾಂಕದೊಳಗೆ ಬೆಳೆ ವಿಮೆ ಯೋಜನೆಯಡಿ ನೋಂದಾವಣಿ ಮಾಡಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ತೋಟಗಾರಿಕೆ ಇಲಾಖೆ, ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...