alex Certify ಬೆಳೆ ವಿಮೆಗೂ ನಾಮಿನಿ ಕಡ್ಡಾಯ: ಬಿ.ಸಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ವಿಮೆಗೂ ನಾಮಿನಿ ಕಡ್ಡಾಯ: ಬಿ.ಸಿ. ಪಾಟೀಲ್

ಬೆಂಗಳೂರು: ರೈತರಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ‌ಕಂಪೆನಿಗಳು ಇನ್ನು ಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆ ಸಂಬಂಧಿಸಿದ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಮಾ ಕಂಪೆನಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದ ಕಚೇರಿಯಲ್ಲಿ ಸಚಿವರು ಬೆಳೆ ವಿಮೆ ಸಂಬಂಧ ಕೃಷಿ ಹಾಗೂ ತೋಟಗಾರಿಕಾ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನಾ ಸಭೆ ನಡೆಸಿದರು.

ಇಷ್ಟುದಿನಗಳ ಕಾಲ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮಾ ಕಂಪೆನಿಗಳು ರೈತರಿಂದ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ನಾಮಿನಿಯನ್ನು ಪರಿಗಣಿಸುತ್ತಿರಲಿಲ್ಲ.ಇದರಿಂದ ವಿಮಾದಾರ ರೈತ ಮೃತಪಟ್ಟಲ್ಲಿ ವಿಮೆ ಕಂತು ಪಡೆಯಲು ತೊಂದರೆಯಾಗುತ್ತಿತ್ತು. ರೈತರ ಅನುಕೂಲಕ್ಕಾಗಿ ಇನ್ನು ಮುಂದೆ ವಿಮಾ ಕಂಪೆನಿಗಳು ರೈತರಿಂದ ವಿಮೆ ಮಾಡಿಸಿಕೊಳ್ಳುವಾಗ ನಾಮಿನಿಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸೂಚಿಸಿದರು.

ಅಲ್ಲದೇ, ಫಸಲ್ ಬೀಮಾ ಯೋಜನೆ ಮಾಡಿಕೊಳ್ಳುವ ವಿಮಾ ಕಂಪೆನಿಗಳು ಕೃಷಿ ಇಲಾಖೆಯಲ್ಲಿ ಕಚೇರಿ ಮಾಡಿಕೊಳ್ಳದೇ ಈ ಹಿಂದೆ ಸೂಚಿಸಿದಂತೆ ಪ್ರತಿ ತಾಲೂಕಿನಲ್ಲಿ ಪ್ರತ್ಯೇಕ ಕಚೇರಿ ತೆರೆಯಬೇಕು. ಅಲ್ಲದೇ, ಕಚೇರಿ ತೆರೆದ ಲೊಕೇಷನ್ ಜಿಪಿಎಸ್ ಲಿಂಕ್ ಅನ್ನು ಕೃಷಿ ಇಲಾಖೆಗೆ ನೀಡಬೇಕೆಂದರು.

ರೈತರು ಚಾಲ್ತಿಯಲ್ಲಿರುವ ಬ್ಯಾಂಕ್ ಅಕೌಂಟನ್ನೇ ಆಧಾರ್ ಕಾರ್ಡ್‌ಗೆ ಜೋಡಿಸಿ ಆಧಾರ್‌ಕಾರ್ಡಿನಲ್ಲಿರುವ ಚಾಲಿತ ಬ್ಯಾಂಕ್ ಅಕೌಂಟ್ ಅನ್ನೇ ಬೆಳೆವಿಮೆಗೆ ದಾಖಲಿಸಬೇಕು. ಕೆಲವೆಡೆ ಬಹುತೇಕ ರೈತರ ಆಧಾರ್ ಕಾರ್ಡ್ ಬೆಳೆವಿಮೆಗೆ ಜೋಡಣೆಯಾದರೂ ಕೂಡ ಆಧಾರ್‌ಕಾರ್ಡ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳು ಚಾಲ್ತಿಯಲ್ಲಿರದೇ ಇವೆ. ಹೀಗೆ ಚಾಲ್ತಿಯಲ್ಲಿರದ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್‌ಗೆ ಜೋಡಿಸಿರುವುದು ಕಂಡುಬಂದಿದೆ. ಇದರಿಂದ ಬಹುತೇಕ ಕಡೆ ಬೆಳೆವಿಮೆ ಪಡೆಯಲು ರೈತರಿಗೆ ತೊಂದರೆಯುಂಟಾಗಿರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ರೈತರು ಎಷ್ಟೇ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೂ ಕೂಡ ಆಧಾರ್ ಕಾರ್ಡಿಗೆ ಜೋಡಿಸಿ ಬೆಳೆವಿಮೆಗೆ ನಮೂದಿಸಿರುವ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಬೇಕು. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನೇ ರೈತರು ಬೆಳೆವಿಮೆಗೆ ನಮೂದಿಸಬೇಕು. ಕೆಲವೆಡೆ ಆಧಾರ್ ಕಾರ್ಡನ್ನು ಕುಟುಂಬದ ಸದಸ್ಯರು ಒಟ್ಟೊಟ್ಟಿಗೆ ಮಾಡಿಸುವಾಗ ಕೆಲವೆಡೆ ಬೆರಳಚ್ಚು ತಪ್ಪಾಗಿ ನಮೂದಾಗಿರುವ ತೊಂದರೆಯೂ ಸಹ ಆಧಾರ್‌ ಕಾರ್ಡಿನಲ್ಲಿ ಕಂಡುಬಂದಿದೆ. ಹೀಗಾಗಿ ಆಧಾರ್ ಕಾರ್ಡಿನಲ್ಲಿರುವ ತೊಂದರೆಗಳನ್ನು ರೈತರು ಕೂಡಲೇ ಸರಿಪಡಿಸಿಕೊಳ್ಳಬೇಕು. ಬೆಳೆವಿಮೆ ಬಗ್ಗೆ ಎಡಿಎ,ಜೆಡಿಎಗಳು ಸಹ ಸರಿಯಾಗಿ ಮಾಹಿತಿ ಪಡೆದು ತಮ್ಕನ್ನು ಸಂಪರ್ಕಿಸುವ ರೈತರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಬಿ.ಸಿ.ಪಾಟೀಲ್ ಸಭೆಯಲ್ಲಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...