alex Certify ರೈತರಿಗೆ ಗುಡ್ ನ್ಯೂಸ್: ಭತ್ತ, ರಾಗಿ, ಬಿಳಿಜೋಳ ಖರೀದಿ ಗರಿಷ್ಠ ಮಿತಿ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಭತ್ತ, ರಾಗಿ, ಬಿಳಿಜೋಳ ಖರೀದಿ ಗರಿಷ್ಠ ಮಿತಿ ತೆರವು

ದಾವಣಗೆರೆ: 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾಗುವ ಭತ್ತ, ರಾಗಿ ಮತ್ತು ಬಿಳಿಜೋಳ ಸಂಗ್ರಹಣೆಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ರೈತರಿಂದ ಹೆಚ್ಚು ಆಹಾರ ಧಾನ್ಯಗಳನ್ನು ಖರೀದಿಸುವ ಉದ್ದೇಶದಿಂದ ಪ್ರತಿ ಎಕರೆಗೆ ನಿಗದಿಪಡಿಸಿರುವ ಮಿತಿಯನ್ನು ಮುಂದುವರೆಸಿದ್ದು, ಗರಿಷ್ಠ ಮಿತಿಯನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿ ಕಾರ್ಯ ಈಗಾಗಲೇ ಜಾರಿಯಲ್ಲಿದೆ. ಕರ್ನಾಟಕ ಸರ್ಕಾರವು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿ ಆದೇಶಿಸಿದೆ.

ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿನ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲಿಸಿ ನಂತರ ರೈತರಿಗೆ ಸಮೀಪವಿರುವ ಅಕ್ಕಿಗಿರಣಿಯಲ್ಲಿ ಖರೀದಿಸಲಾಗುತ್ತಿದೆ. ಮುಂದುವರೆದಂತೆ ಸರ್ಕಾರದ ಆದೇಶದಂತೆ ಜಿಲ್ಲೆಯ ಅರ್ಹ ರೈತರಿಂದ ರಾಗಿ, ಬಿಳಿಜೋಳ (ಹೈಬ್ರಿಡ್/ಮಾಲ್ದಂಡಿ)ವನ್ನು ಆಯಾ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿನ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲಿಸಿ, ಖರೀದಿಸುವ ಕಾರ್ಯ ಪ್ರಗತಿಯಲ್ಲಿದೆ.

ಈಗಾಗಲೇ ಆಹಾರಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿರುವ ರೈತರಿಂದ ಕೂಡಾ ಗರಿಷ್ಠ ಮಿತಿಯನ್ನು ಸಡಿಲಿಸಿ ಆಹಾರಧಾನ್ಯಗಳನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...