alex Certify ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗಲು ಅರ್ಹರಿದ್ದಾರೆ : ಸಚಿವ ಕೆ.ಎನ್ ರಾಜಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗಲು ಅರ್ಹರಿದ್ದಾರೆ : ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗೋದಕ್ಕೆ ಅರ್ಹರು ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿಕೆಶಿ ಸಿಎಂ ಆಗಬೇಕು ಅನ್ನೋದರಲ್ಲಿ ತಪ್ಪೇನಿದೆ. ಮನುಷ್ಯರ ಅನಿಸಿಕೆಗಳು ಇದ್ದೇ ಇರುತ್ತೆ. ಒಬ್ಬೊಬ್ಬರಿಗೆ ಒಂದೊಂದು ಹುದ್ದೆಯಲ್ಲಿ ಆಸೆ ಜಾಸ್ತಿ ಇರಬಹುದು. ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆನ್ನುವುದು ಬಹುಜನರ ಬಯಕೆಯಾಗಿದೆ ಎಂದರು.

ಮುಖ್ಯಮಂತ್ರಿ ಆಗಲು ಶಿವಕುಮಾರ್ಗೂ ಕೂಡ ಎಲ್ಲಾ ಅರ್ಹತೆ ಇದೆ. ಅವರು ಒಳ್ಳೆಯ ಸಂಘಟನೆ ಮಾಡ್ತಾರೆ. ಮೊದಲಿನಿಂದಲೂ ಪಕ್ಷದಲ್ಲಿ ನಿಷ್ಠಾವಂತರಿದ್ದಾರೆ ಎನ್ನುವ ಮೂಲಕ  ಡಿಕೆಶಿ ಪರಸಚಿವ ಕೆ.ಎನ್.ರಾಜಣ್ಣ ಬ್ಯಾಟ್ ಬೀಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...