alex Certify ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಮಣ್ಣಿನ ಕುಡಿಕೆಯಲ್ಲಿ ಚಹಾ –ಪಿಯುಷ್ ಗೋಯಲ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಮಣ್ಣಿನ ಕುಡಿಕೆಯಲ್ಲಿ ಚಹಾ –ಪಿಯುಷ್ ಗೋಯಲ್ ಮಾಹಿತಿ

ನವದೆಹಲಿ: ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬದಲು ಮಣ್ಣಿನ ಲೋಟಗಳಲ್ಲಿ ಚಹಾ ನೀಡಲಾಗುತ್ತದೆ.

ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನದ ಅಂಗವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬದಲು ಮಣ್ಣಿನ ಕುಡಿಕೆಗಳಲ್ಲಿ ಚಹಾ ಕೊಡಲಾಗುವುದು ಎಂದು ರೈಲ್ವೆ ಸಚಿವ ಪಿಯುಷ್  ಗೋಯಲ್ ಹೇಳಿದ್ದಾರೆ.

ದೇಶದ 400 ರೈಲು ನಿಲ್ದಾಣಗಳಲ್ಲಿ ಮಣ್ಣಿನ ಲೋಟದಲ್ಲಿ ಚಹಾ ನೀಡುವ ಪದ್ಧತಿ ಈಗಾಗಲೇ ಜಾರಿಯಲ್ಲಿದ್ದು, ಉಳಿದ ನಿಲ್ದಾಣಗಳಲ್ಲಿ ಇದನ್ನು ವಿಸ್ತರಿಸಲಾಗುವುದು. ಗುಡಿ ಕೈಗಾರಿಕೆ ಅವಲಂಬಿಸಿದ ಲಕ್ಷಾಂತರ ಮಂದಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...