alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ರೈತರಿಂದ ಅರ್ಜಿ ಆಹ್ವಾನಿಸಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ ಕಾರ್ಯಕ್ರಮದಡಿ ಹೈನುಗಾರಿಕೆ ಘಟಕದಡಿ ಮಿಶ್ರತಳಿ ದನಗಳ ನಿರ್ವಹಣೆ (1+1) ಗೆ ಪ್ರತಿ ಹಸುವಿಗೆ ಗರಿಷ್ಠ 14,000 ರೂ. ನಂತೆ ಒಟ್ಟು ಎರಡು ಹಸುಗಳಿಗೆ 28,000 ರೂ. ಸಾಲ ಸೌಲಭ್ಯ.  ಸುಧಾರಿತ ಎಮ್ಮೆಗಳ ನಿರ್ವಹಣೆ (1+1) ಗೆ ಪ್ರತಿ ಎಮ್ಮೆಗೆ ಗರಿಷ್ಠ 16,000 ರೂ. ನಂತೆ ಎರಡು ಎಮ್ಮೆಗಳಿಗೆ 32,000 ರೂ. ಸಾಲ ಸೌಲಭ್ಯವಿದೆ.

ಕುರಿ ಸಾಕಾಣಿಕೆ ಘಟಕದಡಿ ಕುರಿಗಳ ನಿರ್ವಹಣೆ (10+01) ಗೆ ಕಟ್ಟಿ ಮೇಯಿಸುವ ಕುರಿಗಳಿಗೆ 24,000 ರೂ. ನಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ 12,000 ರೂ. ಸಾಲ ಸೌಲಭ್ಯವಿದೆ. ಕುರಿಗಳ ನಿರ್ವಹಣೆ (20+01) ಗೆ ಕಟ್ಟಿ ಮೇಯಿಸುವ ಕುರಿಗಳಿಗೆ 48,000 ರೂ. ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ 24,000 ರೂ. ಸಾಲ ಸೌಲಭ್ಯವಿದೆ.  ಟಗರುಗಳ ನಿರ್ವಹಣೆಗೆ (10ಕ್ಕೆ) 13,000 ರೂ.  ಸಾಲ ಸೌಲಭ್ಯ, ಟಗರುಗಳ ನಿರ್ವಹಣೆ (20) ಗೆ 26,000 ರೂ. ಸಾಲ ಸೌಲಭ್ಯವಿದೆ.

ಆಸಕ್ತ ರೈತರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯಲ್ಲಿ ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗೆ ಡಾ.ಶಿವಕುಮಾರ್ ಜಿ.ಎಸ್. ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲೆ. ಮೊ.ಸಂ. 9353567572 ಕ್ಕೆ ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಚಂದ್ರಶೇಖರ ಎಸ್. ಸುಂಕದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...