alex Certify ಹೊಸ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ದಾವಣಗೆರೆ: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಮತ್ತು 10 ಲಕ್ಷ ರೂಪಾಯಿ ಸಾಲ ನೀಡಲಾಗುತ್ತಿದ್ದು, ಈ ಮೊತ್ತವನ್ನು ಹೆಚ್ಚಳ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಬಾರ್ಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಗೊಂದಲಾಗಿದೆ. 3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ರೂ. ಸಾಲ ನೀಡಲು ನಿರ್ಧರಿಸಲಾಗಿದೆ. ಇದುವರೆಗೂ ಸಾಲ ಪಡೆದುಕೊಳ್ಳದ 3 ಲಕ್ಷ ರೈತರನ್ನು ಗುರುತಿಸಿ ಅವರಿಗೆ ಸಾಲ ನೀಡಲಾಗುತ್ತದೆ. ಯಶಸ್ವಿನಿ ಯೋಜನೆಯನ್ನು ಪುನಾರಂಬಿಸಲಾಗುತ್ತದೆ ಅಕ್ಟೋಬರ್ 2 ರಿಂದ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...