alex Certify ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಮುಖ್ಯ ಮಾಹಿತಿ: ರೈತರ ಸಾಲ ಮನ್ನಾ ಯೋಚನೆ ಇಲ್ಲ, ಬಲವಂತದ ವಸೂಲಿಯೂ ಇಲ್ಲ; ಸಚಿವ ಎಸ್.ಟಿ. ಸೋಮಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಮುಖ್ಯ ಮಾಹಿತಿ: ರೈತರ ಸಾಲ ಮನ್ನಾ ಯೋಚನೆ ಇಲ್ಲ, ಬಲವಂತದ ವಸೂಲಿಯೂ ಇಲ್ಲ; ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಾಜ್ಯದ 30.26 ಲಕ್ಷ ರೈತರಿಗೆ 19,370 ಕೋಟಿ ರೂಪಾಯಿ ಅಲ್ಪಾವಧಿ ಬೆಳೆ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

30.86 ಲಕ್ಷ ರೈತರಿಗೆ 20,810 ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿತ್ತು. 30.26 ಲಕ್ಷ ರೈತರಿಗೆ 19.370 ಕೋಟಿ ರೂ. ಅಲ್ಪಾವಧಿ ಬೆಳೆ ಸಾಲ ಹಾಗೂ 0.60 ಲಕ್ಷ ರೈತರಿಗೆ 1440 ಕೋಟಿ ರೂ ಮಧ್ಯಮಾವಧಿ, ದೀರ್ಘಾವಧಿ ಸಾಲ ನೀಡಲಾಗಿದೆ. ಶೂನ್ಯ ಬಡ್ಡಿ ದರದ ಸಾಲ ಶೇಕಡ 100 ರಷ್ಟು ಗುರಿ ಸಾಧಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಸಾಲ ಮನ್ನಾದ ಬಗ್ಗೆ ಯೋಚಿಸಿಲ್ಲ. ಬಲವಂತದ ಸಾಲ ವಸೂಲಾತಿಯೂ ಇಲ್ಲವೆಂದು ಅವರು ಹೇಳಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಡಿಸಿಸಿ ಬ್ಯಾಂಕಿನ ಅಲ್ಪಾವಧಿ ಮಧ್ಯಮಾವಧಿ ಕೃಷಿ ಸಾಲ ಬಡ್ಡಿ ಸಹಾಯಧನ ನೀಡಲು 1012 ಕೋಟಿ ರೂ. ಸಹಾಯಧನ ಅನುದಾನ ಕಲ್ಪಿಸಿದ್ದು, ಇದುವರೆಗೆ 757.21 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...