alex Certify ರೈತರಿಗೆ ವಿಶೇಷ ಪ್ಯಾಕೇಜ್: ಸಾಲ ಮನ್ನಾ ಸೇರಿ ಮೋದಿ ಸರ್ಕಾರದಿಂದ ಹಲವು ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ವಿಶೇಷ ಪ್ಯಾಕೇಜ್: ಸಾಲ ಮನ್ನಾ ಸೇರಿ ಮೋದಿ ಸರ್ಕಾರದಿಂದ ಹಲವು ಕೊಡುಗೆ

ನವದೆಹಲಿ: ಆರ್ಥಿಕತೆಗೆ ಉತ್ತೇಜನ ನೀಡಲು ವಿಶೇಷ ಪ್ಯಾಕೇಜ್ ನೀಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ನದಾತ ರೈತರಿಗೂ ಬಂಪರ್ ಕೊಡುಗೆ ನೀಡಲು ಮುಂದಾಗಿದೆ ಎನ್ನಲಾಗಿದೆ.

ಸೊರಗಿರುವ ಅನ್ನದಾತರಿಗೆ ಮೋದಿ ಬಂಪರ್ ಗಿಫ್ಟ್ ನೀಡಲಿದ್ದು, ದೇಶಕ್ಕೆ ಅನ್ನ ನೀಡುವ ರೈತರ ಸಾಲ ಮನ್ನಾ ಮಾಡಲು ಮೋದಿ ಚಿಂತನೆ ನಡೆಸಿದ್ದಾರೆ. ಸಹಾಯಕ್ಕಾಗಿ ಎದುರು ನೋಡುತ್ತಿರುವ ರೈತರಿಗೆ ನೆರವು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಇದರಲ್ಲಿ ಕಿಸಾನ್ ಸಮ್ಮಾನ್ ಯೋಜನೆಗೆ ಮತ್ತಷ್ಟು ನೆರವು ನೀಡಲಾಗುವುದು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬಹುದು. ವಾಣಿಜ್ಯ ಬೆಳೆಗಳ ರಫ್ತಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಕೃಷಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಬಿತ್ತನೆ ಬೀಜ ರಸಗೊಬ್ಬರ ಖರೀದಿಗೆ ವಿನಾಯಿತಿ ನೀಡಲಾಗುವುದು. ಸಾಲ ಮನ್ನಾ ಜೊತೆಗೆ ಕಡಿಮೆ ಬಡ್ಡಿ ದರ ಅಥವಾ ಬಡ್ಡಿ ರಹಿತ ಕೃಷಿ ಸಾಲ, ಕೃಷಿ ಯಂತ್ರೋಪಕರಣಗಳ ಖರೀದಿಗೆ ಪ್ರೋತ್ಸಾಹ ಧನ ನೀಡುವ ಸಾಧ್ಯತೆ ಇದೆ.

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬಹುದಾಗಿದ್ದು, ಕೃಷಿಯಲ್ಲಿ ಸುಧಾರಣೆ ತರಲು ವಿಶೇಷ ಪ್ಯಾಕೇಜ್ ನೀಡಲಾಗುವುದು. ರೈತರ ಸಾಲ ಮನ್ನಾ ಮಾಡುವ ಸಾಧ್ಯತೆ ಇದ್ದು, ಬೀಜ ಮತ್ತು ರಸಗೊಬ್ಬರ ವಿನಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...