alex Certify ರೈತರು, ಬಡವರಿಗೆ ಬಿಗ್ ಶಾಕ್: ಉಚಿತ ವಿದ್ಯುತ್ ಕಡಿತ..? ಮೊಬೈಲ್ ಕಂಪನಿ ರೀತಿ ವಿದ್ಯುತ್ ಕಂಪನಿ ಆಯ್ಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಬಡವರಿಗೆ ಬಿಗ್ ಶಾಕ್: ಉಚಿತ ವಿದ್ಯುತ್ ಕಡಿತ..? ಮೊಬೈಲ್ ಕಂಪನಿ ರೀತಿ ವಿದ್ಯುತ್ ಕಂಪನಿ ಆಯ್ಕೆಗೆ ಅವಕಾಶ

ನವದೆಹಲಿ: ಮೊಬೈಲ್ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ರೀತಿಯಲ್ಲಿ ವಿದ್ಯುತ್ ವಿತರಣೆಗೆ ತಮಗೆ ಬೇಕಾದ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ಗ್ರಾಹಕರಿಗೆ ಅವಕಾಶ ಕಲ್ಪಿಸುವ ವಿದ್ಯುತ್(ತಿದ್ದುಪಡಿ) ಮಸೂದೆ 2022 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.

ಇದನ್ನು ವಿರೋಧಿಸಿ ದೇಶಾದ್ಯಂತ ವಿದ್ಯುತ್ ಇಲಾಖೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ವಿವಾದಿತ ವಿದ್ಯುತ್ ಮಸೂದೆಯನ್ನು ಕೇಂದ್ರ ಸಚಿವ ಆರ್.ಕೆ. ಸಿಂಗ್ ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಮಸೂದೆಯನ್ನು ಸ್ಥಾಯಿ ಸಮಿತಿ ಸುಪರ್ದಿಗೆ ನೀಡಿದ್ದಾರೆ.

ಈ ಮಸೂದೆಯ ಜಾರಿಯಾದಲ್ಲಿ ಗ್ರಾಹಕರಿಗೆ ವಿದ್ಯುತ್ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿರುತ್ತದೆ. ರೈತರು, ಬಡವರ ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳ್ಳಬಹುದು ಎನ್ನುವ ಆತಂಕ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...